ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. ಡಿಸೆಂಬರ್ 15, ಭಾನುವಾರದಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ತಬಲಾ ಮಾಂತ್ರಿಕ ಕೊನೆಯುಸಿರೆಳೆದರು. ವರದಿಯ ಪ್ರಕಾರ, ಪದ್ಮಭೂಷಣ ಪುರಸ್ಕೃತರು ರಕ್ತದೊತ್ತಡ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಮತ್ತು ಇಂದು ಮುಂಜಾನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.