ಮೂಡುಬಿದಿರೆ: ಕಳೆದ 12 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಸುತ್ತಿರುವ ಅಪಪ್ರಚಾರವನ್ನು ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಖಂಡಿಸಿದೆ.
ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ ಶೆಟ್ಟಿ ಅವರು ಧರ್ಮಸ್ಥಳದ ವಿರುದ್ಧ ಆರೋಪಿಸುವವರು ಯಾವುದೇ ಸಾಕ್ಷಿ ಇದ್ದರೆ ಡಿಸೆಂಬರ್ 31ರ ಒಳಗೆ ಕೊಡಬೇಕು ಎಂದರು.
ಸುಳ್ಳನ್ನು ಪದೇಪದೇ ಹೇಳಿ, ಸತ್ಯ ಎಂಬಂತೆ ಬಿಂಬಿಸುವ ಪ್ರಯತ್ನಗಳನ್ನು ಪ್ರತಿಭಟನಾಕಾರರು ಮಾಡುತ್ತಿದ್ದಾರೆ. ಧರ್ಮಸ್ಥಳದ ವಿರುದ್ಧ ಇಂತಹ ಷಡ್ಯಂತ್ರಗಳು ಯಶಸ್ವಿಯಾಗುವುದಿಲ್ಲ. ಸಾಕ್ಷ್ಯ ಸಲ್ಲಿಸಲು ವಿಫಲರಾದರೆ ಸರಕಾರ ಎಲ್ಲಾ ಆರೋಪಗಳು ಸುಳ್ಳು ಎಂದು ರಾಜ್ಯ ಗೃಹ ಸಚಿವರು ಅಧಿಕೃತವಾಗಿ ಘೋಷಿಸಬೇಕು. ಎಸ್.ಐ.ಟಿ.ಯ ವರದಿಯನ್ನು ಶೀಘ್ರವೇ ಪಡೆದು ಎಲ್ಲಾ ಊಹಾಪೋಹಗಳಿಗೆ ಶೀಘ್ರವೇ ತೆರೆ ಎಳೆಯಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಸಂಚಾಲಕ ಕೆ.ಪಿ. ಜಗದೀಶ ಅಧಿಕಾರಿ, ಜಿಲ್ಲಾ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಅರುಣಪ್ರಕಾಶ್ ಶೆಟ್ಟಿ, ನಾಗೇಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಜಿ.ಟಿ. ಆಚಾರ್ಯ, ಸುರೇಂದ್ರ ಮೆಂಡನ್ ಉಪಸ್ಥಿತರಿದ್ದರು.
