ಬಂಟ್ವಾಳ: ತುಳುನಾಡಿನ ರೈತರ ಕಂಬಳ ಕ್ರೀಡೆ ಕೇವಲ ಮನೋರಂಜನೆಗೆ ಸೀಮಿತವಾಗದೆ, ಧಾರ್ಮಿಕ ನಂಬಿಕೆಯೊಂದಿಗೆ ಬೆಸೆದುಕೊಂಡಿದೆ ಎಂದು ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಹೇಳಿದ್ದಾರೆ. ಇಲ್ಲಿನ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡು ಕರೆಯಲ್ಲಿ ಶನಿವಾರ ನಡೆದ 3ನೇ ವರ್ಷದ ವೀರ-ವಿಕ್ರಮ ಜೋಡುಕರೆ ಕಂಬಳ ಧ್ವಜಾರೋಹಣ ನೆರವೇರಿಸಿದ ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೂಡುಬಿದ್ರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಯುವರಾಜ್ ಜೈನ್ ಕಂಬಳ ಕರೆ ಉದ್ಘಾಟಿಸಿ ಮಾತನಾಡಿ, 'ರಾಜಾಶ್ರಯ ಮೂಲಕ ಬೆಳೆದು ಬಂದ ಕಂಬಳದ ಬಗ್ಗೆ ಶಿಲಾ ಶಾಸನಗಳಲ್ಲಿಯೂ ಉಲ್ಲೇಖವಿದೆ' ಎಂದರು.
ಉದ್ಯಮಿ ಕರುಣಾಕರ ಶೆಟ್ಟಿ ಗೋಳಿದೊಟ್ಟು, ಕೊಯಿಲ ಶ್ರೀ ಮಹಾಗಣಪತಿ ದೇವಳದ ಮೊಕ್ತೇಸರ ಎಂ. ಪದ್ಮರಾಜ್ ಬಳ್ಳಾಲ್ ಮಾವಂತೂರು, ರೋಟರಿ ಮಾಜಿ ಸಹಾಯಕ ಗವರ್ನರ್ ಇಲ್ಯಾಸ್ ಸಾಂಕ್ತೀಸ್, ಜಿಲ್ಲಾ ತೀರ್ಪುಗಾರ ವಿಜಯಕುಮಾರ್ ಕಂಗಿನ ಮನೆ ಶುಭ ಹಾರೈಸಿದರು.
ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ವಾಮದಪದವು ವಲಯ ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕೇದಗೆ, ಪ್ರಮುಖರಾದ ಸುಧಾಕರ ಚೌಟ ಬಾವ, ರಾಜೇಶ್ ಶೆಟ್ಟಿ ಸೀತಾಳ, ಬಾಬು ರಾಜೇಂದ್ರ ಶೆಟ್ಟಿ, ಸುದರ್ಶನ್ ಮಂಜಿಲ, ಸತೀಶ್ ಕುಮಾರ್ ಬಿ.ಸಿ.ರೋಡು, ಸುರೇಶ ಶೆಟ್ಟಿ ಕುತ್ಲೋಡಿ, ಕುಕ್ಕಿಪಾಡಿ ಗ್ರಾ.ಪಂ.ಅಧ್ಯಕ್ಷ ಶೇಖರ ಶೆಟ್ಟಿ ಬದ್ಯಾರು, ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಸಿದ್ಧಕಟ್ಟೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಕಾರ್ಯದರ್ಶಿ ಮೋಹನ್ ಕೆ.ಶ್ರೀಯಾನ್ ರಾಯಿ, ಸಮಿತಿ ಪದಾಧಿಕಾರಿಗಳಾದ ಕಿರಣ್ ಕುಮಾರ್ ಮಂಜಿಲ, ಶಶಿಧರ ಶೆಟ್ಟಿ ಕಲ್ಲಾಪು, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಚಂದ್ರಶೇಖರ ಕೊಡಂಗೆ, ಜನಾರ್ದನ ತಿಮರಡ್ಕ, ಉಮೇಶ್ ಶೆಟ್ಟಿ ಕೊನೆರೊಟ್ಟು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರೊಟ್ಟು, ನವೀನ್ ಹೆಗ್ಡೆ ಮಣಿಪಾಲ, ಉಮೇಶ್ ಹಿಂಗಾಣಿ, ಅವನ್ ಕುಮಾರ್ ಜೈನ್, ದುಗರ್ಾದಾಸ್ ಶೆಟ್ಟಿ ಕರೆಂಕಿಜೆ, ಬಿ. ಶಿವಾನಂದ ರೈ, ಸುಧೀಂದ್ರ ಶೆಟ್ಟಿ ಕಲಾಯಿದಡ್ಡ, ಗಣೇಶ ಶೆಟ್ಟಿ, ಸ್ಥಳದಾನಿ ಓಬಯ ಪೂಜಾರಿ ಕೊಡಂಗೆ, ಕೊರಗಪ್ಪ ಪೂಜಾರಿ ಕೊಡಂಗೆ ಮತ್ತಿತರರು ಇದ್ದರು.
ಶಿಫಾಲಿ ಉಮೇಶ್ ಹಿಂಗಾಣಿ ಪ್ರಾರ್ಥಿಸಿದರು. ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕೋಶಾಧಿಕಾರಿ ರಾಘವೇಂದ್ರ ಭಟ್ ವಂದಿಸಿದರು. ಗೌರವ ಸಲಹೆಗಾರ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಮತ್ತು ನಿತೇಶ್ ಶೆಟ್ಟಿ ವಾಮದಪದವು ಕಾರ್ಯಕ್ರಮ ನಿರೂಪಿಸಿದರು.
